ಸಮಗ್ರ ಸುದ್ದಿ

ರಾಜ್ಯದಲ್ಲಿ 3 ಭ್ರೂಣಹತ್ಯೆ ಪ್ರಕರಣ ದಾಖಲು; 13 ಜನರ ಬಂಧನ: ಸಚಿವ ದಿನೇಶ್ ಗುಂಡೂರಾವ್

Share

ಬೆಳಗಾವಿ: ರಾಜ್ಯದಲ್ಲಿ ಎರಡು ವರ್ಷಗಳಲ್ಲಿ ಮೂರು ಭ್ರೂಣಹತ್ಯೆ ಪ್ರಕರಣಗಳು ದಾಖಲಾಗಿದ್ದು, ಈ ಪ್ರಕರಣಗಲ್ಲಿ 13 ಜನರನ್ನು ಬಂಧಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗಂಡೂರಾವ್ ತಿಳಿಸಿದರು.

ವಿಧಾನ ಪರಿಷತ್ತಿನಲ್ಲಿಂದು ಪ್ರಶ್ನೋತ್ತರ ವೇಳೆ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ ಪಿ ಜಿ ಆಸ್ಪತ್ರೆಯ 6 ಜನರನ್ನು, ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸರ್ಕಾರಿ ವಸತಿ ಗೃಹದ 6 ಜನರನ್ನು ಮತ್ತು ಬೆಂಗಳೂರ ನಗರ ಜಿಲ್ಲೆಯ ದ್ಯಾನಿಷ್ ಪಾಲಿ ಕ್ಲಿನಿಕ್ ಆಸ್ಪತ್ರೆಯ ಒಬ್ಬರನ್ನು ಬಂಧಿಸಲಾಗಿದೆ. ಈ ಪ್ರಕರಣಗಳ ತನಿಖೆಯು ನ್ಯಾಯಾಲಯಗಳಲ್ಲಿ ಬಾಕಿ ಇರುತ್ತದೆ ಎಂದು ತಿಳಿಸಿದರು.

ಸೇವೆಯಿಂದ ಅಮಾನತು: ಈ ಹಿಂದೆ ಬೆಳಕಿಗೆ ಬಂದಿದ್ದ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮವಹಿಸಲಾಗಿದ್ದು, ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ ಭ್ರೂಣಲಿಂಗ ಪತ್ತೆಗೆ ಸಂಬಂಧಿಸಿದ ಪ್ರಕರಣದಲ್ಲಿ ಶಾಮೀಲಾಗಿರಬೇಕೆಂಬ ಹಿನ್ನೆಲೆಯಲ್ಲಿ ಡಾ.ಶಶಿ ಎಸ್.ಎಲ್., ರೇಡಿಯಾಲಜಿಸ್ಟ್ ಇವರನ್ನು ದಿನಾಂಕ: 03-09-2025ರಂದು ಸೇವೆಯಿಂದ ಅಮಾನತ್ತುಗೊಳಿಸಿದೆ ಎಂದು ಸಚಿವರು ಮಾಹಿತಿ ನೀಡಿದರು.


Share

You cannot copy content of this page