ಸಮಗ್ರ ಸುದ್ದಿ

ರಸ್ತೆ ಸುರಕ್ಷತೆಗಾಗಿ ಜನಜಾಗೃತಿ: ಫೆಬ್ರವರಿ 1ರಂದು ಬೆಂಗಳೂರಿನಲ್ಲಿ ‘5K ಸೇಫ್-ಎ-ಥಾನ್’ ಆಯೋಜನೆ – ಸಚಿವ ರಾಮಲಿಂಗಾರೆಡ್ಡಿ

Share

ಬೆಂಗಳೂರು: ರಸ್ತೆ ಸುರಕ್ಷತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸಾರಿಗೆ ಇಲಾಖೆಯು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಫೆಬ್ರವರಿ 1 ರಂದು ಬೆಂಗಳೂರಿನಲ್ಲಿ ಬೃಹತ್ ‘5K ಸೇಫ್-ಎ-ಥಾನ್’ (Safe-A-Thon) ಆಯೋಜಿಸಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
 
ಶಾಂತಿ ನಗರದಲ್ಲಿರುವ ಸಾರಿಗೆ ಇಲಾಖೆ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವರು, “ನಮ್ಮ ರಸ್ತೆ – ನಮ್ಮ ಸುರಕ್ಷತೆ” ಎಂಬ ಧ್ಯೇಯವಾಕ್ಯದೊಂದಿಗೆ ನಡೆಯುವ ಈ ಕಾರ್ಯಕ್ರಮವು ಸಾರ್ವಜನಿಕರ ಜೀವ ರಕ್ಷಣೆಯ ಉದ್ದೇಶ ಹೊಂದಿದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳು ಕಳವಳಕಾರಿಯಾಗಿದ್ದು, ಅತಿವೇಗ, ಸಂಚಾರ ನಿಯಮಗಳ ಉಲ್ಲಂಘನೆ ಮತ್ತು ಅಜಾಗರೂಕತೆಯೇ ಇದಕ್ಕೆ ಮುಖ್ಯ ಕಾರಣಗಳಾಗಿವೆ. ಇವುಗಳನ್ನು ತಡೆಗಟ್ಟಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಈ ಅಭಿಯಾನದ ಮುಖ್ಯ ಗುರಿಯಾಗಿದೆ ಎಂದರು.
 
ರಸ್ತೆ ಸುರಕ್ಷತೆ ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬರ ಕರ್ತವ್ಯ. ವಾಕಿಂಗ್, ಸೈಕ್ಲಿಂಗ್ ಅಥವಾ ಓಟದ ಮೂಲಕ ಈ ಅಭಿಯಾನದಲ್ಲಿ ಪಾಲ್ಗೊಂಡು ಸುರಕ್ಷಿತ ಸಂಚಾರದ ಬಗ್ಗೆ ಪ್ರತಿಜ್ಞೆ ಮಾಡೋಣ ಎಂದು ಸಚಿವರು ಕರೆ ನೀಡಿದರು.

ಫೆಬ್ರವರಿ 01, 2026  ರಂದು  ಬೆಳಿಗ್ಗೆ 6 ರಿಂದ 8 ಗಂಟೆಯವರೆಗೆ  ಶ್ರೀಕಂಠೀರವ ಕ್ರೀಡಾಂಗಣದಲ್ಲಿ  ರಸ್ತೆ ಸುರಕ್ಷತೆಗಾಗಿ ಜನಜಾಗೃತಿ: ‘‘5K ಸೇಫ್-ಎ-ಥಾನ್’ (Safe-A-Thon) ಆಯೋಜನೆಯನ್ನು  ಮಾಡಲಾಗಿದೆ.
 
ಉಚಿತ ನೋಂದಣಿ: ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ. ಸಾರ್ವಜನಿಕರು ಮತ್ತು ಯುವಜನರು ಮುಕ್ತವಾಗಿ ಭಾಗವಹಿಸಬಹುದು.

ಆಸಕ್ತರು ಜಾಲತಾಣ  www.saferoadskarnataka.com  ಮೂಲಕ ಅಥವಾ ಚಿತ್ರದಲ್ಲಿರುವ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡಿ ನೋಂದಾಯಿಸಿಕೊಳ್ಳಬಹುದು ಎಂದು ಹೇಳಿದರು.


Share

You cannot copy content of this page