ಸಮಗ್ರ ಸುದ್ದಿ

ಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ; ಲಕ್ಷ್ಮೀ ಹೆಬ್ಬಾಳ್ಕರ್

Share

ಬೆಂಗಳೂರು: ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಮಹಿಳೆಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ. ಪಕ್ಷದ ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತೋ ಅದಕ್ಕೆ ಬದ್ಧರಾಗಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಿರಿಯರಿದ್ದಾರೆ ಮತ್ತು ಸಮರ್ಥರಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರ ನಡೆಸಲಿದ್ದಾರೆ ಎಂದು ಹೇಳಿದರು.

ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೇಳಿದ ಪ್ರಶ್ನೆಗೆ, ಪ್ರಜಾಪ್ರಭುತ್ವದಲ್ಲಿ ಅಭಿಪ್ರಾಯಗಳಿಗೆ ಬೆಲೆ ಇರುತ್ತದೆ. ಪಕ್ಷದ ಹಿರಿಯರು ಇದರ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದರು.

ಬೆಳಗಾವಿ ರಾಜಕಾರಣ ನಿಮ್ಮ ಸಚಿವ ಸ್ಥಾನಕ್ಕೆ ಅಡ್ಡಿಯಾಗ್ತಿದೆಯಾ ಎಂಬ ಪ್ರಶ್ನೆಗೆ, ಖಂಡಿತವಾಗಿಯೂ ಅಂತಹದ್ದೇನೂ ಇಲ್ಲ. 2023ರಲ್ಲಿಯೇ ಆ ಕುರಿತು ಎಲ್ಲ ತೀರ್ಮಾನ ಆಗಿದೆ. ಎಲ್ಲ ಸಮಾಧಾನದಿಂದ ಮುಂದೆ ಹೋಗ್ತಾ ಇದ್ದೇವೆ. ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು ಇನ್ನೂ ಎರಡು ಸಚಿವ ಸ್ಥಾನ ನೀಡಬೇಕೆಂದು ಬೇಡಿಕೆ ಇಟ್ಟಿದ್ದೇವೆ. ಬೆಳಗಾವಿ ಮೂರು ಜಿಲ್ಲೆಗಳಿಗೆ ಸಮನಾಗುವಷ್ಟು ದೊಡ್ಡದಿದೆ. ಹಾಗಾಗಿ ನಾವು ಹೆಚ್ಚುವರಿ ಸಚಿವ ಸ್ಥಾನ ಕೇಳಿದ್ದೇವೆ ಎಂದರು.‌


Share

You cannot copy content of this page