ಬೆಂಗಳೂರು: ಕರ್ನಾಟಕ ಸರ್ಕಾರದ 2026ನೇ ಸಾಲಿನ 14ನೇ ಸಚಿವ ಸಂಪುಟ ಸಭೆಯನ್ನು ಇಂದು ಅಂದರೆ ಜೂನ್ 20, ಶನಿವಾರ ಬೆಳಿಗ್ಗೆ 10:30 ಕ್ಕೆ ಕರೆಯಲಾಗಿದೆ.
ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಈ ಮಹತ್ವದ ಸಭೆ ನಡೆಯಲಿದ್ದು, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಎಲ್ಲಾ ಸಚಿವರುಗಳು ಭಾಗವಹಿಸಲಿದ್ದಾರೆ.
ರಾಜ್ಯದ ಹಲವು ಪ್ರಮುಖ ಯೋಜನೆಗಳು ಹಾಗೂ ಆಡಳಿತಾತ್ಮಕ ನಿರ್ಧಾರಗಳ ಕುರಿತು ಸಭೆಯಲ್ಲಿ ಚರ್ಚಿಸಿ ಅನುಮೋದನೆ ನೀಡುವ ಸಾಧ್ಯತೆಯಿದೆ.
ರಾಜ್ಯ ಸರ್ಕಾರದ ಮುಂದಿನ ನಡೆ ಹಾಗೂ ಪ್ರಮುಖ ನಿರ್ಣಯಗಳ ದೃಷ್ಟಿಯಿಂದ ಇಂದಿನ ಸಂಪುಟ ಸಭೆ ಅತ್ಯಂತ ಕುತೂಹಲ ಮೂಡಿಸಿದೆ.
