ಬೆಂಗಳೂರು: ಗ್ರಾಮೀಣ ಆಸ್ತಿಗಳಿಗೆ ಇ ಸ್ವತ್ತು ನೀಡಿಕೆಯಲ್ಲಿ ವಿಳಂಬವಾಗುತ್ತಿರುವುದನ್ನು ಪರಿಹರಿಸಿ, ಮನೆ ಮನೆಗೆ ಇಸ್ವತ್ತು ನೀಡುವ ಅಭಿಯಾನ ಆರಂಭಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ತಿಳಿಸಿದ್ದಾರೆ.
ಇ ಸ್ವತ್ತು ನೀಡಿಕೆಯಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳಿದ್ದು ಒಂದು ತಿಂಗಳಲ್ಲಿ ಇವುಗಳನ್ನು ಬಗೆಹರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ತಂತ್ರಾಂಶದ ಸಮಸ್ಯೆ ಪರಿಹಾರವಾದ ಬಳಿಕ ಮುಂದಿನ ತಿಂಗಳಿಂದ ಮನೆ ಮನೆಗೆ ಇಸ್ವತ್ತು ನೀಡುವ ಯೋಜನೆ ಹಮ್ಮಿಕೊಳ್ಳಲು ಚಿಂತಿಸಲಾಗಿದೆ ಎಂದರು.
