ಬೆಂಗಳೂರು:ಮುಂದಿನ ವರ್ಷದಿಂದ ಸರ್ಕಾರದ ವತಿಯಿಂದ ಇಂಜಿನಿಯರ್ ಗಳ ದಿನ ಆಚರಣೆ ಮಾಡಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ಕೆ ಆರ್ ವೃತ್ತದಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಶಿವಕುಮಾರ್ ಅವರು ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು.
“ಸರ್ಕಾರ ವತಿಯಿಂದ ಇಂಜಿನಿಯರ್ ದಿನ ಆಚರಿಸುವ ಪ್ರಸ್ತಾವನೆ ನೀಡಿದ್ದು, ನಾನು ಅದಕ್ಕೆ ಸಮ್ಮತಿ ಸೂಚಿಸಿದ್ದೇನೆ. ನಮ್ಮ ರಾಜ್ಯದಲ್ಲಿ ಪ್ರತಿ ವರ್ಷ 1 ಲಕ್ಷಕ್ಕೂ ಹೆಚ್ಚು ತಯಾರು ಮಾಡುತ್ತಿದೆ. ಭಾರತದಲ್ಲಿ ಅತಿ ಹೆಚ್ಚು ಇಂಜಿನಿಯರ್ ಇದ್ದು, ಅವರನ್ನು ಗುರುತಿಸುವುದು ನಮ್ಮ ಕರ್ತವ್ಯ. ಎಲ್ಲಾ ಇಂಜಿನಿಯರ್ ಗಳು ರಾಜ್ಯದ ಉದ್ದಗಲ ಗಮನಿಸಬೇಕು. ಇದರ ರೂಪುರೇಷೆಗಳನ್ನು ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು” ಎಂದು ತಿಳಿಸಿದರು.
ಅಭಿವೃದ್ಧಿಗೆ ಅಡಿಪಾಯ ಹಾಕುವವರು ಇಂಜಿನಿಯರ್ ಗಳು
“ಇಂದು ಇಂಜಿನಿಯರ್ ಗಳ ದಿನವಾಗಿದ್ದು, ಸರ್ ಎಂ ವಿಶ್ವೇಶ್ವರಯ್ಯ ಅವರಿಗೆ ಸರ್ಕಾರದ ಪರವಾಗಿ ಮಾಲಾರ್ಪಣೆ ಮಾಡಲಾಗಿದೆ. ಇಂಜಿನಿಯರ್ ಗಳು ದೇಶದ ಆಸ್ತಿ. ವಿಜ್ಞಾನಿಗಳ ಸಂಶೋಧನೆಗಳನ್ನು ಕಾರ್ಯಗತ ಗೊಳಿಸುತ್ತಿರುವವರು ಇಂಜಿನಿಯರ್ ಗಳು. ಎಲ್ಲಾ ಅಭಿವೃದ್ಧಿಗೆ ಅಡಿಪಾಯ ಹಾಕುವವರು ಇಂಜಿನಿಯರ್ ಗಳು. ವಾಸ್ತುಶಿಲ್ಪದ ಪರಂಪರೆಯಲ್ಲಿ ನಾವು ಇಂಜಿನಿಯರ್ ಗಳನ್ನು ಗುರುತಿಸುತ್ತಿದ್ದೆವು. ಈಗ ಇಂಧನ, ಕಟ್ಟಡ ನಿರ್ಮಾಣ, ಐಟಿ ತಂತ್ರಜ್ಞಾನದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ವಿಶ್ವೇಶ್ವರಯ್ಯ ಅವರು ದೇಶಕ್ಕೆ ಮಾದರಿ. ಕರ್ನಾಟಕಕ್ಕೆ ಅವರ ಕೊಡುಗೆ ಅಪಾರ ಎಂದು ತಿಳಿಸಿದರು.
